ಮಳವಳ್ಳಿ: ಅಧಿಕಾರದಿಂದ ಕೆಳಗೆ ಇಳಿಸಿದವರ ಜೊತೆ ಒಳ ಒಪ್ಪಂದ ಮಾಡಿಕೊಳ್ಳಲು ಜೆಡಿಎಸ್ ಪಕ್ಷ ಹೊರಟಿದೆ ಎಂದು ಮಾಜಿ ಸಚಿವ ಪಿ ಎಂ ನರೇಂದ್ರಸ್ವಾಮಿ ಆರೋಪಿಸಿದ್ದಾರೆ.ಮಳವಳ್ಳಿ ತಾಲ್ಲೂಕಿನ ಪೂರಿಗಾಲಿ ಗ್ರಾಮದಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,2006 ರಿಂದ 2008 ಯಾವ ಒಳ ಒಪ್ಪಂದ ಮಾಡಿಕೊಂಡಿದ್ದರು ಆಗ ಯಡಿಯೂರಪ್ಪರನ್ನು ಮರೆತಿದ್ದರು.ಇದಲ್ಲದೆ ಎರಡನೇಯ ಬಾರಿ 2018 ಒಳ ಒಪ್ಪಂದ ಮಾಡಿಕೊಂಡಿದ್ದರು, ಆಗಲೂ ಸಹ ಯಡಿಯೂರಪ್ಪ ರವರನ್ನು ಕುಮಾರಸ್ವಾಮಿ ಮರೆತರು.ಈಗ ಪುನಃ ಒಳ ಒಪ್ಪಂದ ಮಾಡಲು ಹೊರಡಿದ್ದಾರೆ ಮತ್ತೆ ಮರುಕಳುಹಿಸುತ್ತದೆ ಎಂದು ಭವಿಷ್ಯ ನುಡಿದರು.ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಬಗ್ಗೆ ನಾನು ಮಾತನಾಡುವುದಿಲ್ಲ, ನಮ್ಮ ನಾಯಕರು ಈಗಾಗಲೇ ಮಾತನಾಡಿದ್ದಾರೆ. ನಮ್ಮಕ್ಷೇತ್ರದಲ್ಲಿ ಎಷ್ಟರ ಮಟ್ಟಿಗೆ ಹೊಂದಾಣಿಕೆ ಮಾಡಿಕೊಂಡಿದ್ದು ಎಲ್ಲರಿಗೂ ಗೊತ್ತು ಎಂದರು.
ವರದಿ- ಎ.ಎನ್ ಲೋಕೇಶ್ ಎಕ್ಸ್ಪ್ರೆಸ್ ಟಿವಿ ಮಳವಳ್ಳಿ