ಬೆಂಗಳೂರು: ಬ್ರಿಟನ್ ಸೋಂಕು ಭಾರತದಲ್ಲಿ ಕಾಣಿಸಿಕೊಂಡ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ಹಿನ್ನೆಲೆ ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಇಂದಿನಿಂದ ಜನವರಿ 2 ರವರೆಗೆ ರಾತ್ರಿ 10 ರಿಂದ ಬೆಳಗಿನ ಜಾವ 6 ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ವಿದೇಶದಿಂದ ಬರುವ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸುವಂತೆ ಆದೇಶ ಮಾಡಲಾಗಿದೆ. ಇನ್ನು ತುರ್ತು ಸೇವೆಗಳಿಗೆ ಮಾತ್ರ ನೈಟ್ ಕರ್ಫ್ಯೂ ವೇಳೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಈಗಾಗಲೇ ರಾಜ್ಯಾದ್ಯಂತ ಕೆಟ್ಟೆಚ್ಚರ ವಹಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು