ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಬೂಗತಹಳ್ಳಿಗ್ರಾಮದ ಮನೆ ಪಕ್ಕದಲ್ಲಿ ಹಾಕಲಾಗಿದ್ದ ಹುಲ್ಲಿನಮೆದೆಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ನಾಶವಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಧಾ ನಾಗರಾಜು ರವರಿಗೆ ಸೇರಿದ ಹುಲ್ಲಿನಮೆದೆ ಸಂಪೂರ್ಣವಾಗಿ ಇದೀಗ ಸುಟ್ಟು ಭಸ್ಮವಾಗಿದೆ. ಕಳೆದ ರಾತ್ರಿ ಆಕಸ್ಮಿಕ ಬೆಂಕಿ ತಗುಲಿದ್ದು, ಗ್ರಾಮದ ಕೃಷ್ಣ ಎಂಬುವರು ಬೆಂಕಿ ತಗುಲಿರುವ ಬಗ್ಗೆ ತಿಳಿಸಿ ತಕ್ಷಣ ಅಗ್ನಿ ಶಾಮಕದಳದವರಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು,ಅಷ್ಟರೊಳಗೆ ಹುಲ್ಲಿನ ಮೆದೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸುಮಾರು ಎರಡು ಎಕರೆಯಲ್ಲಿ ಬೆಳೆದಿದ್ದ ಬೆಳೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇನ್ನೂ ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ