ಲಿಂಗಸೂಗೂರು

ಮಾನಪ್ಪ ವಜ್ಜಲ್ ಗೆ ಸನ್ಮಾನ ಮಾಡಿದ ಮುದುಕಪ್ಪ ವಕೀಲರ- ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಪಕ್ಷ ಸೇರ್ತಾರ ಮುದುಕಪ್ಪ..!

Published

on

ಲಿಂಗಸೂಗೂರು: ಹಾಲುಮತ ಸಮಾಜದ ಪ್ರಭಾವಿ ಮುಖಂಡ ಮುದುಕಪ್ಪ ವಕೀಲರು ಇಂದು ಹಟ್ಟಿ ಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ಗೆ ಸನ್ಮಾನಿಸಿ ಶುಭಕೋರಿದರು. ಕಳೆದ ಎರಡು ಅವಧಿಗೆ ಶಾಸಕರಾಗಿದ್ದ ಮಾನಪ್ಪ ವಜ್ಜಲ್ ಅವರು ಕ್ಷೇತ್ರದಲ್ಲಿ ಹತ್ತಾರು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನಮಾನಸದಲ್ಲಿ ನೆಲೆಸಿದ್ದಾರೆ. ವಜ್ಜಲ್ ಅವರ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಇಂದಿಗೂ ಪ್ರಸ್ತುತವಾಗಿವೆ. ಸರಳ ಸಜ್ಜನಿಕೆಯ ರಾಜಕಾರಣಿಯಾಗಿರುವ ವಜ್ಜಲ್ ಅವರು, ಜಾತಿ ರಾಜಕಾರಣ ಮಾಡದೇ ಎಲ್ಲಾ ವರ್ಗದವರಿಗೆ ಸರಿಸಮಾನವಾಗಿ ನಡೆದುಕೊಳ್ಳುವ ಜಾತ್ಯಾತೀತ ಮನೋಭಾವನೆ ಉಳ್ಳವರಾಗಿದ್ದಾರೆ. ಹಟ್ಟಿ ಚಿನ್ನದ ಗಣಿ ಅಧ್ಯಕ್ಷರಾಗುವ ಮೂಲಕ ಮತ್ತೊಮ್ಮೆ ಕ್ಷೇತ್ರದ ಅಭಿವೃದ್ಧಿಗೆ ಮಾನಪ್ಪನವರು ಮುಂದಾಗಬೇಕು. ಇನ್ನೂ ದಶಕಗಳಿಂದ ಮಾನಪ್ಪ ವಜ್ಜಲ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮುದುಕಪ್ಪ ವಕೀಲರು ಪ್ರಸ್ತುತ ಕಾಂಗ್ರೆಸ್ ಪಕ್ಷದಲ್ಲಿದ್ದು, ಇದೀಗ ಬಿಜೆಪಿಗೆ ಬರುವ ಮುನ್ಸೂಚನೆ ನೀಡುತ್ತಿದ್ದಾರೆಯೇ ಎನ್ನುವಂತಹ ವಾತಾವರಣ ಈ ಭೇಟಿಯಿಂದ ಸೃಷ್ಟಿಯಾಗಿದೆ. ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ ಎನ್ನುವ ಮಾತು ಪದೇ ಪದೇ ಸಾಬೀತಾಗುತ್ತಲೇ ಇರುತ್ತದೆ. ಇದಕ್ಕೆ ಇದೊಂದು ಚಿಕ್ಕ ಉದಾಹರಣೆಯಷ್ಟೇ.

ವರದಿ-ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ ಲಿಂಗಸೂಗೂರು.

Click to comment

Trending

Exit mobile version