ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರ್ ವಾಜ್ ಪೇಯಿ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಕಾವೇರಿ ನಿವಾಸದಲ್ಲಿ ವಾಜಪೇಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಕೂಡಾ ಉಪಸ್ಥಿತರಿದ್ದರು. ದೇಶಾದ್ಯಂತ ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ ಹಾಗೂ ಅಜಾತಶತ್ರು ಪ್ರಧಾನಿ ಎಂದೇ ಖ್ಯಾತರಾಗಿದ್ದ ದಿವಂಗತ ಅಟಲ್ ಬಿಹಾರಿ ಅವರ 96ನೇ ಜನ್ಮದಿನ ಆಚರಣೆ ಮಾಡಲಾಗುತ್ತಿದೆ. ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಮಾಜಿ ಪ್ರಧಾನಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.
ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಟಿವಿ ಬೆಂಗಳೂರು