Connect with us

ಮೊಳಕಾಲ್ಮೂರು

ಎರಡನೇ ಹಂತದ ಗ್ರಾಮಪಂಚಾಯತ್ ಚುನಾವಣೆಗೆ ಪೂರ್ವ ಸಿದ್ಧತೆ..!

Published

on

ಮೊಳಕಾಲ್ಮುರು: ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಿಮಿತ್ತ ಅಧಿಕಾರಿಗಳು ಹಾಗೂ ಎಲ್ಲಾ ಸಿಬ್ಬಂದಿಗಳು ಪೂರ್ವ ಸಿದ್ಧತೆಯಲ್ಲಿ ತೊಡಗಿದ್ದಾರೆ. ಗ್ರಾಪಂ ಚುನಾವಣೆಯಲ್ಲಿ ಒಟ್ಟು162 ಮತಗಟ್ಟೆಗಳಿದ್ದು,ಇದರಲ್ಲಿ 12 ಮತಗಟ್ಟೆಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನೂಳಿದ 150 ಮತಗಟ್ಟೆಗಳಿಗೆ ನಾಳೆ ಚುನಾವಣೆ ನಡೆಯಲಿದೆ. ಇನ್ನೂ ಈ ಬಗ್ಗೆ ಚುನಾವಣೆ ಅಧಿಕಾರಿಗಳಾದ ಸತೀಶ್ ರೆಡ್ಡಿ ಅವರ ನೇತೃತ್ವದಲ್ಲಿ ಎಲ್ಲಾ ಸಿಬ್ಬಂದಿಗಳಿಗೆ ಮಾಹಿತಿಯನ್ನು ನೀಡಿದದ್ದಾರೆ.ಇನ್ನೂ ಈ ವೇಳೆ ಇ.ಒ ಪ್ರಕಾಶ್ ಮಾತನಾಡಿ ಎಲ್ಲಾ ಮತಗಟ್ಟೆಗಳಲ್ಲಿ ಯಾವುದೇ ರೀತಿಯಾ ತೊಂದರೆ ಉಂಟಾಗಬಾರದು, ಇನ್ನೂ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. PRO178, APRO178, PO356, ಇದರಂತೆ ಎಲ್ಲಾ ಕೊಠಡಿಗಳಿಗೆ ಹೋಗಿ ತಮ್ಮ ತಮ್ಮ ಮಾಹಿತಿಯನ್ನು ತೆಗೆದುಕೊಂಡು ಮಧ್ಯಾಹ್ನದ ಮೇಲೆ ಅವರವರ ಹಳ್ಳಿಗಳಿಗೆ ಹೋಗಬೇಕೆಂದು ತಿಳಿಸಿದರು.

ವರದಿ- ಪಿ.ಗಂಗಾಧರ್ ಎಕ್ಸ್ ಪ್ರೆಸ್ ಟಿವಿ ಮೊಳಕಾಲ್ಮುರು

Continue Reading
Click to comment

Leave a Reply

Your email address will not be published. Required fields are marked *

ಮೊಳಕಾಲ್ಮೂರು

ರೈತರ ಬೇಡಿಕೆಗಳಿಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ…!

Published

on

By

ಮೊಳಕಾಲ್ಮುರ: ರೈತ ವಿರೋಧಿ ಕೃಷಿ ಕಾಯಿದೆಗಳನ್ನು ಹಾಗೂ ಜನವಿರೋಧಿ ವಿದ್ಯುತ್ ಮಸೂದೆಯನ್ನು ಹಿಂಪಡೆಯಲು ಒತ್ತಾಯಿಸಿ ದೆಹಲಿಯಲ್ಲಿ ನಡೆದಿರುವ ರೈತರ ಹೋರಾಟ ಬೆಂಬಲಿಸಿ ಮೊಳಕಾಲ್ಮೂರಿನಲ್ಲಿ ಸಿಐಟಿಯು ಕಾರ್ಯಕರ್ತರು ತಹಶೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಸಿದರು.ಮೊಳಕಾಲ್ಮೂರು ತಾಲ್ಲೂಕಿನ ಕೆಇಬಿ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೂ ಪ್ರತಿಭಟನೆ ಮೆರವಣಿಗೆ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ್ರು.ಇನ್ನೂ 3 ಕಾಯ್ದೆಗಳನ್ನು ಕೈಬಿಡುವಂತೆ ಒತ್ತಾಯಿಸಿ ಮೊಳಕಾಲ್ಮುರು ತಹಶೀಲ್ದಾರ್ ಮೂಲಕ ಮೇಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ರು. ಇದೇ ಸಂದರ್ಭದಲ್ಲಿ ಸಿಐಟಿಯುನ ತಾಲೂಕು ಅಧ್ಯಕ್ಷರಾದ ಡಿ.ಎಂ ಮಲಿಯಪ್ಪ ಮಾತನಾಡಿ, ಪ್ರಧಾನಮಂತ್ರಿಗಳಿಗೆ ರೈತರ ಮೇಲೆ ಕಾಳಜಿ ಇಲ್ಲ 48 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ.ಈಗಾಗಲೇ ಕೆಲವು ರೈತರು ಮೃತಪಟ್ಟಿದ್ದಾರೆ.ಅಲ್ಲದೆ “ಕಾರ್ಮಿಕರ ಹಕ್ಕುಗಳನ್ನು ಉಳಿಸುತ್ತವೆ,ರೈತರ ಬದುಕನ್ನು ರಕ್ಷಿಸುತ್ತೇವೆ, ಕಾರ್ಪೊರೇಟ್ ಹಿಡಿತದಿಂದ ದೇಶವನ್ನು ಕಾಪಾಡುತ್ತೇವೆ ಎಂಬ ಪ್ರತಿಜ್ಞೆಯೊಂದಿಗೆ ಅಧಿಕಾರ ಹಿಡಿದ ಕೇಂದ್ರ ಸರ್ಕಾರ ರೈತರ ಜೀವನದಲ್ಲಿ ಆಟವಾಡುತ್ತಿದೆ ಎಂದು ಗುಡುಗಿದರು.

ವರದಿ- ಪಿ.ಎಂ ಗಂಗಾಧರ್ ಎಕ್ಸ್ ಪ್ರೆಸ್ ಟಿವಿ ಮೊಳಕಾಲ್ಮುರ

Continue Reading

ಮೊಳಕಾಲ್ಮೂರು

ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಎಂಎಲ್ಎ ತಿಪ್ಪೇಸ್ವಾಮಿ..!

Published

on

By

ಮೊಳಕಾಲ್ಮುರು: ಮೊಳಕಾಲ್ಮುರು ಪಟ್ಟಣದ ಕೆ.ಇ.ಬಿ ವೃತ್ತದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಎಂಎಲ್ಎ ತಿಪ್ಪೇಸ್ವಾಮಿ ಸಚಿವರ ಕ್ಷೇತ್ರದಲ್ಲಿ ಬಿಜೆಪಿ ಅಲೆ ಇರುವುದು ಸತ್ಯಕ್ಕೆ ದೂರವಾದ ಮಾತು .ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಶೇಕಡಾ 80 ರಷ್ಟು ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಗೆದ್ದು ಬೀಗಿದ್ದಾರೆ. ಮೊಳಕಾಲ್ಮುರು ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆ ಇದನ್ನು ಮುಂದಿನ ದಿನಗಳಲ್ಲಿ ,ಜಿಲ್ಲಾ ಪಂಚಾಯತ್ ,ತಾಲ್ಲೂಕು ಪಂಚಾಯಿತಿ,ಚುನಾವಣೆಯಲ್ಲಿ ಮತ್ತೆ ನಾವು ಸಾಬೀತು ಮಾಡುತ್ತೇವೆ. ಇಲ್ಲಿ 3 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ .ಇಲ್ಲಿ ನೀವು ಸಚಿವರಾಗಿದ್ದೀರಿ ನಿಮ್ಮದೇ ಸರ್ಕಾರ,ಮತ್ತೆ ಏಕೆ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ ಅವರಿಗೆ ಜನಪರ ಕಾಳಜಿ ಇಲ್ಲ ಅನ್ಯರೊಡನೆ ರಾಜಕೀಯ ಮಾಡುತ್ತಾರೆ. ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಜತೆ ಮಾತನಾಡಿ ಗ್ರಾಮ ಪಂಚಾಯಿತಿಯಲ್ಲಿ ಹೆಚ್ಚಾಗಿ ಯುವ ಜನತೆ ವಿಜೇತರಾಗಿರುವುದು ಉತ್ತಮ ಬೆಳವಣಿಗೆ ಎಂದರು ಬಡ ಹಾಗೂ ಕೆಳವರ್ಗದ ಜನರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ಎಂದು ಗುಡುಗಿದರು .

ವರದಿ-ಪಿ.ಎಂ ಗಂಗಾಧರ ಎಕ್ಸ್ ಪ್ರೆಸ್ ಟಿವಿ ಮೊಳಕಾಲ್ಮುರು

Continue Reading

ಮೊಳಕಾಲ್ಮೂರು

ಕೊರೋನಾ ನಿಯಮ ಪಾಲನೆಯೊಂದಿಗೆ ಜ್ಯೂನಿಯರ್ ಕಾಲೇಜು ಪ್ರಾರಂಭ ..!

Published

on

By

ಮೊಳಕಾಲ್ಮುರು: ರಾಜ್ಯ ಸರ್ಕಾರದ ಆದೇಶದಂತೆ ಎಲ್ಲಾ ಕಾಲೇಜುಗಳು ಪ್ರಾರಂಭವಾಗಿದ್ದು ಮೊಳಕಾಲ್ಮೂರು ಪಟ್ಟಣದ ಜೂನಿಯರ್ ಕಾಲೇಜು ಎಲ್ಲಾ ಕೊರೋನಾ ನಿಯಮದ ಪಾಲನೆಯೊಂದಿಗೆ ಎಲ್ಲಾ ಸಕಲ ಸಿದ್ಧತೆಯೊಂದಿಗೆ ಕಾಲೇಜು ಓಪನ್ ಆಗಿದೆ. ಕಾಲೇಜಿನ ಪ್ರತಿಯೊಂದು ಕೊಠಡಿಗೆ ಸ್ಯಾನಿಟೈಸರ್ ಮಾಡಿಸಿ ಸ್ವಚ್ಛತೆಯನ್ನು ಕೈಗೊಂಡರು.ಇನ್ನೂ ಕಾಲೇಜಿಗೆ ಹಾಗೂ ಆಗಮಿಸುವ ಪ್ರತಿಯೊಂದು ವಿದ್ಯಾರ್ಥಿಗಳಿಗೂ ಥರ್ಮಾಮೀಟರ್ ನಿಂದ ಟೆಂಪ್ರೆಚರ್ ಚೆಕ್ ಮಾಡಿ ವಿದ್ಯಾರ್ಥಿಗಳಲ್ಲಿ ಪರಸ್ಪರ ಅಂತರವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಇನ್ನೂ ಎಲ್ಲಾ ವಿದ್ಯಾರ್ಥಿಗಳು ಕಾಲೇಜಿಗೆ ಖುಷಿಯಿಂದ ಮಾಸ್ಕ್ ಧರಿಸಿ ಆಗಮಿಸುತ್ತಿರುವುದು ವಿಶೇಷವಾಗಿತ್ತು. ಕೆಲ ವಿದ್ಯಾರ್ಥಿಗಳು ಮಾತನಾಡಿ ಆನ್ ಲೈನ್ ಕ್ಲಾಸ್ ನಿಂದ ತುಂಬಾ ತೊಂದರೆಯಾಗುತ್ತಿತ್ತು.ಇದೀಗ ಎಲ್ಲಾ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಒಟ್ಟಾಗಿ ಕಲಿಯಬಹುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಹನುಮಂತಪ್ಪನವರು, ಉಪನ್ಯಾಸಕರಾದ ತಿಪ್ಪೇಸ್ವಾಮಿ, ಕರೂರ್ ಪ್ರಕಾಶ್, ಭಾಗ್ಯಮ್ಮಮಂಜುನಾಥ್, ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ- ಪಿ.ಎಂ ಗಂಗಾಧರ ಎಕ್ಸ್ ಪ್ರೆಸ್ ಟಿವಿ ಮೊಳಕಾಲ್ಮುರು

Continue Reading

Trending

Copyright © 2023 EXPRESS TV KANNADA