ಮಂಡ್ಯ

ಪ್ರತಿಭಾ ಪುರಸ್ಕಾರ ಪ್ರಶಸ್ತಿ ಹಾಗೂ ಕ್ಯಾಲೆಂಡರ್ ಬಿಡುಗಡೆ…!

Published

on

ಮಳವಳ್ಳಿ: ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ವತಿಯಿಂದ ಸದಸ್ಯರ ಮಕ್ಕಳ ಪ್ರತಿಭಾ ಪುರಸ್ಕಾರ ಪ್ರಶಸ್ತಿ ಸಮಾರಂಭ ಹಾಗೂ ಕ್ಯಾಲೆಂಡರ್ ಬಿಡುಗಡೆ ಸಮಾರಂಭವನ್ನು ಮಳವಳ್ಳಿ ಪಟ್ಟಣದ ಕೋಟೆ ಬೀದಿಯಲ್ಲಿರುವ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 15 ವಿದ್ಯಾರ್ಥಿಗಳಿಗೆ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಸಮಾರಂಭದ ದಿವ್ಯ ಸಾನಿದ್ಯವನ್ನು ಡಿ.ಹಲಸಹಳ್ಳಿ ಗವಿಮಠದ ಷಡಕ್ಷರಿ ಸ್ಬಾಮಿಜೀ ವಹಿಸಿ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಇನ್ನೂ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಜಶೇಖರ್ ವಹಿಸಿದ್ದು, ಇನ್ನೂ ಈ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಮಾಜಿ ಉಪಾಧ್ಯಕ್ಷ ಕುಂದೂರು ಜಗದೀಶ್, ಆನಂದ್, ಸುಗುಣ ರಮೇಶ್, ಚನ್ನಪ್ಪ, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎ.ಬಿ ನಾಗರಾಜು, ಸೇರಿದಂತೆ ಮತ್ತಿತ್ತರರು ಉಪಸ್ಥೀತರಿದ್ದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version