ಮೊಳಕಾಲ್ಮೂರು

ಮೊಳಕಾಲ್ಮುರಿನಲ್ಲಿ ಶಾಂತಿಯುತವಾಗಿ ನಡೆದ ಮತದಾನ..!

Published

on

ಮೊಳಕಾಲ್ಮುರ: ಮೊಳಕಾಲ್ಮುರು ತಾಲ್ಲೂಕಿನ ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ ನಡೆದ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ,ತಾಲ್ಲೂಕಿನ 16 ಗ್ರಾಮ ಪಂಚಾಯಿತಿಗಳಲ್ಲಿ 311 ಸದಸ್ಯ ಸ್ಥಾನಗಳಿಗೆ ಶಾಂತಿಯುತ ಮತದಾನ ನಡೆಯಿತು. ಎಲ್ಲ ಮತಗಟ್ಟೆಗಳಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು,ಮತದಾರರಿಗೆ ಥರ್ಮಲ್ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಜರ್ ಬಳಸುತ್ತಾ ಕೋಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸಿದರು. ಈ ಬಾರಿ ತಾಲ್ಲೂಕಿನಲ್ಲಿ ಒಟ್ಟಾರೆ 85.68% ನಷ್ಟು ಮತದಾನವಾಗಿದ್ದು, ತಾಲ್ಲೂಕಿನಾದ್ಯಂತ ಒಟ್ಟು 93ಸಾವಿರದ 124 ಮತದಾರರಿದ್ದು 80 ಸಾವಿರದ 945 ಜನ ಭಾನವಾರ ಮತದಾನ ಮಾಡಿದ್ದಾರೆ ಎಂದು ಪ್ರಾಥಮಿಕ ಹಂತದಲ್ಲಿ ತಿಳಿಸಿದ್ದಾರು. ರಾಂಪುರದಲ್ಲಿ ಕೂಡ್ಲೆಗೆ ಶಾಸಕ ಎನ್ ವೈ ಗೋಪಾಲಕೃಷ್ಣ ಅವರು ಸಿದ್ದಯ್ಯನ ಕೋಟೆಯಲ್ಲಿ ಶ್ರೀ ಮಠದ ಬಸವಲಿಂಗ ಸ್ವಾಮೀಜಿ, ಬಿಜಿ ಕೆರೆಯಲ್ಲಿ ಜಿಲ್ಲಾಪಂ ಸದಸ್ಯ ಡಾ.ಯೋಗೇಶ್ ಬಾಬು ಇನ್ನು ಮುಂತಾದವರು ಮತ ಚಲಾಯಿಸಿದರು.

ವರದಿ-ಸಿಎಂ ಗಂಗಾಧರ ಎಕ್ಸ್ ಪ್ರೆಸ್ ಟಿವಿ ಮೊಳಕಾಲ್ಮುರು .

Click to comment

Trending

Exit mobile version