ಚಿಕ್ಕಬಳ್ಳಾಪುರ: ಡಿಸೆಂಬರ್ 30 ರಿಂದ ಜನವರಿ 2 ವರೆಗೆ ಮೂರು ದಿನಗಳ ಕಾಲ ನಂದಿಗಿರಿ ಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರುವಂತೆ ಜಿಲ್ಲಾಧಿಕಾರಿ ಆರ್.ಲತಾ ಅವರು ಆದೇಶ ಹೊರಡಿಸಿದ್ದಾರೆ. ಹೊಸ ವರ್ಷ ಆಚರಣೆ ಹಿನ್ನಲೆಯಲ್ಲಿ ಪ್ರವಾಸಿಗರು ಹೆಚ್ವಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್ ಸೋಂಕು ಹರಡದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಪ್ರತಿ ವರ್ಷ ಹೊಸ ವರ್ಷಕ್ಕೆ ಒಂದು ದಿನದ ಮಟ್ಟಿಗೆ ನಂದಿಗಿರಿ ಧಾಮಕ್ಕೆ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರುತ್ತಿತ್ತು. ಆದರೆ, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಮೂರು ದಿನಗಳ ಕಾಲ ನಂದಿಗಿರಿ ಧಾಮ ಪ್ರವೇಶವನ್ನು ಪ್ರವಾಸಿಗರಿಗೆ ನಿಷೇಧಿಸಿದೆ.
ವರದಿ-ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ