ಯಾವಾಗಲೂ ನಗುತ್ತಾ, ನಗಿಸುತ್ತಾ ಮಾತನಾಡುವ ನಟ ಪ್ರಥಮ್ ಈಗ ತೀವ್ರ ಕೋಪ ಹೊರಹಾಕಿದ್ದಾರೆ. ಮೈಸೂರಿನ ಕೆಲವು ವೈದ್ಯರ ಮೇಲೆ ಅವರು ಕಿಡಿಕಾರುತ್ತಿದ್ದಾರೆ.
‘ಕೋವಿಡ್ ಸಮಯದಲ್ಲಿ 2000ಕ್ಕೂ ಹೆಚ್ಚು ಕುಟುಂಬ, ವೈದ್ಯರಿಗೆ ಪ್ರಾಮಾಣಿಕವಾಗಿ ಕಿಟ್ ತಲುಪಿಸಿದ ನನ್ನ ಕುಟುಂಬದ ಸ್ವಂತ ಅಜ್ಜಿಗೆ ಇವತ್ತು ಬೆಡ್ ಕೊಡದೇ ರಾತ್ರಿ ಇಡೀ ರಸ್ತೆಯಲ್ಲಿ ನರಳಿಸಿ ಮೈಸೂರಿನ ರಾಕ್ಷಸ ವೈದ್ಯ ಸಿಬ್ಬಂದಿಗಳು ಸಾಯಿಸಿದ್ರು.40 ಸಾವಿರ ಕಿತ್ಕೊಂಡು ಮಧ್ಯರಾತ್ರಿ ಆಸ್ಪತ್ರೆಯಿಂದ ನಮ್ಮಜ್ಜಿನ ಓಡಿಸಿ, ಸಾಯಿಸಿದ ವೈದ್ಯಕೀಯ ಲೋಕಕ್ಕೆ ನಾಚಿಕೆ ಆಗ್ಬೇಕು’ ಎಂದು ಗುಡುಗಿದ್ದಾರೆ. ಇನ್ನೂ ಮೈಸೂರು ವೈದ್ಯರಿಂದ ತಮಗೆ ಆದ ಅನ್ಯಾಯವನ್ನು ಸೋಶಿಯಲ್ ಮೀಡಿಯಾ ಮೂಲಕ ಬಹಿರಂಗ ಪಡಿಸಿದ್ದಾರೆ. ಒಬ್ಬ ಸೆಲೆಬ್ರಿಟಿಗೆ ಈ ರೀತಿಯಾದರೆ ಸಾಮಾನ್ಯ ಜನರ ಗತಿ ಏನು ಎಂದು ಅನೇಕರು ಪ್ರಶ್ನಿಸುತ್ತಿದ್ದಾರೆ. ಇದೇ ವಿಚಾರವನ್ನು ಫೇಸ್ಬುಕ್ನಲ್ಲಿಯೂ ಬರೆದುಕೊಂಡಿರುವ ಪ್ರಥಮ್, ಕೊಂಚ ಖಾರವಾಗಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಒಂದೇ ವಾರದಲ್ಲಿ ನಮ್ಮ ಮನೆಯಲ್ಲಿ ಇನ್ನೊಂದು ಸಾವು.ಮಧ್ಯರಾತ್ರಿ ದುಡ್ಡು ಕಿತ್ಕೊಂಡು ಆಸ್ಪತ್ರೆಗೂ ಸೇರಿಸಿಕೊಳ್ಳದೇ ಪ್ರಾಣ ತೆಗೆದ ನೀವು ವೈದ್ಯರಾ? ಯಾವ ಬೇ**ರ್ಸಿ ನಿಮ್ಮನ್ನ ಜೀವರಕ್ಷಕರು ಅಂದಿದ್ದು? ನಾಚಿಕೆಯಾಗ್ಬೇಕು ನಿಮ್ಗೆ. ಯಾವ ಆಸ್ಪತ್ರೆಯಲ್ಲೂ ಬೆಡ್ವೆಂಟಿಲೇಟರ್ ಕೊಡದೇ 40 ಸಾವಿರ ದುಡ್ಡನ್ನು ಕಿತ್ಕೊಂಡು ಸಾಯಿಸಿಯೇ ಬಿಟ್ರು. ನನ್ನ ಲೈಫ್ನಲ್ಲಿ ಇನ್ಯಾರಿಗೂ ಒಂದು ಹನಿ ನೀರು ಕೊಡಲ್ಲ’ ಎಂದು ಪ್ರಥಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ- ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು