ಚಿಕ್ಕಬಳ್ಳಾಪುರ

ಶಾಸಕರಿಗೆ ದಮ್ಕಿ ಹಾಕಿದ ಮಧುಸೂದನ್ ರೆಡ್ಡಿ- ರೆಡ್ಡಿಯನ್ನು ಬಂದಿಸುವಂತೆ ಶಾಸಕರ ಅಭಿಮಾನಿಗಳಿಂದ ಒತ್ತಾಯ..!

Published

on

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗಡಿ ತಾಲ್ಲೂಕು ಬಾಗೇಪಲ್ಲಿ ತಾಲೂಕಿನ ಚೇಳೂರಿನಲ್ಲಿ ಇತ್ತೀಚೆಗಷ್ಟೆ ಗ್ರಾಮ ಪಂಚಾಯ್ತಿ ಚುನಾವಣೆ ಮುಗಿಸಿ ರಿಲ್ಯಾಕ್ಸ್ ಮೂಡ್ ನಲ್ಲಿರುವ ಬಾಗೇಪಲ್ಲಿ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ವಿರುದ್ದ ಬಾಗೇಪಲ್ಲಿ ತಾಲ್ಲೂಕಿನ ಚೇಳೂರಿನ ನಿವಾಸಿ ಮಧುಸೂದನ್ ರೆಡ್ಡಿ, ಕೆಎನ್ ಅಲಿಯಾಸ್ ಅಪೋಲೋ ಟೈಯರ್ಸ್ ಎಂಬ ವ್ಯಕ್ತಿ ಕಳೆದ ರಾತ್ರಿ ಕುಡಿದ ಅಮಲಿನಲ್ಲಿ ಶಾಸಕರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಾಯಿದೆ.ಇದರಿಂದ ಶಾಸಕ ಸುಬ್ಬಾರೆಡ್ಡಿ ಅಭಿಮಾನಿಗಳ ಪಿತ್ತ ನೆತ್ತಗೇರುವಂತೆ ಮಾಡಿದೆ, ಆಕ್ರೋಶಗೊಂಡ ಸುಬ್ಬಾರೆಡ್ಡಿ ಅಭಿಮಾನಿಗಳು ಚೇಳೂರು ಹೋಬಳಿಯಲ್ಲಿ ಪ್ರತಿಭಟನೆ ಮಾಡಿ ಸಮಾಜಸೇವಕ ಗುಂಜೂರು ಶ್ರೀನಿವಾಸರೆಡ್ಡಿ ಕಾರ್ಯಕರ್ತನಾದ ಮಧುಸೂದನ್ ರೆಡ್ಡಿಗೆ ತಕ್ಕ ಪಾಠ ಕಲಿಸುವಂತೆ ಆಗ್ರಹ ಮಾಡಿದ್ದಾರೆ. ಚೇಳೂರು ಹೋಬಳಿಯ ಹಾಲಿ ತಾಲೂಕು ಪಂಚಾಯ್ತಿ ಸದಸ್ಯ ರಾಮಕೃಷ್ಣಾರೆಡ್ಡಿ ತಮ್ಮನಾದ ಮಧುಸೂದನ್ ರೆಡ್ಡಿಯನ್ನು ತಕ್ಷಣ ಪೊಲೀಸರು ಬಂದಿಸಿ ಬಾಗೇಪಲ್ಲಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ವರದಿ-ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Click to comment

Trending

Exit mobile version