ಮಳವಳ್ಳಿ: ವಿಶ್ವ ಮಾನವ ವಿಚಾರ ವೇದಿಕೆ ವತಿಯಿಂದ ಕುವೆಂಪುರವರ 116 ನೇ ವರ್ಷ ಜನ್ಮ ದಿನಾಚರಣೆ ಹಾಗೂ ದಿನ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದ ವಿಶ್ವ ಮಾನವ ವಿಚಾರ ವೇದಿಕೆ ಕಚೇರಿಯ ಆವರಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಪುರಸಭಾಧ್ಯಕ್ಷೆ ರಾಧ ನಾಗರಾಜುರವರು ಉದ್ಘಾಟಿಸಿದರು.ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿರವರು ಮಾತನಾಡಿ ವಿಚಾರವಂತರ ನಡುವೆ ನಾವೆಲ್ಲ ಇದ್ದೇವೆ ಎನ್ನುವುದೇ ಸಮಾದಾನದ ಸಂಗತಿ,ವಿಚಾರವಂತರಿಗೆ ತೊಂದರೆ ತಪ್ಪಿದ್ದಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.ಇನ್ನೂ ಇದೇ ವೇಳೆ ಹಂದಿನಾಗಣ್ಣ, ಸಿಐಟಿಯು ರಾಜ್ಯ ಕಾರ್ಯದರ್ಶಿ ಜಿ.ರಾಮಕೃಷ್ಣ, ಹಿರಿಯ ರಂಗಕಲಾವಿದ ಪುಟ್ಟಸ್ವಾಮಾಚಾರ್ಯ,ಜಯರಾಜು ರವರನ್ನು ಸನ್ಮಾನಿಸಲಾಯಿತು. ಇನ್ನೂ ಕಾರ್ಯಕ್ರಮದಲ್ಲಿ ವಿಶ್ವ ಮಾನವ ವಿಚಾರ ವೇದಿಕೆ ಅಧ್ಯಕ್ಷ ಮ.ಸಿ ನಾರಾಯಣ, ಪ್ರಧಾನ ಕಾರ್ಯದರ್ಶಿ ನಾಗೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಪುಟ್ಟಸ್ವಾಮಿ, ನಾಗರಾಜು, ವಿಶ್ವಗುರು ಸೊಸೈಟಿ ಅಧ್ಯಕ್ಷ ಕೃಷ್ಣಶೆಟ್ಟಿ, ಭರತ್ ರಾಜ್ ಸೇರಿದಂತೆ ಮತ್ತಿತ್ತರರು ಇದ್ದರು.
ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ