Uncategorized

ಮಾಲೂರಿನಲ್ಲಿ ಅಟ್ಟಹಾಸ ಮೆರೆದ ಚಿರತೆ- ದಾಳಿಗೆ ಎರಡು ಕುರಿ ಬಲಿ..!

Published

on

ಮಾಲೂರು: ಚಿರತೆ ದಾಳಿಯಿಂದ ಎರಡು ಕುರಿ ಬಲಿಯಾಗಿರುವ ಘಟನೆ ಮಾಲೂರು ತಾಲ್ಲೂಕಿನ ಮಾಸ್ತಿ ಹೋಬಳಿಯ ದಿನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.ಇಂದು ಮುಂಜಾನೆ 4 ಗಂಟೆ ಸುಮಾರಿಗೆ ದಾಳಿಯಾಗಿದ್ದು, ಪದೇಪದೇ ಕುರಿ ಹಾಗೂ ಹಸುಗಳ ಮೇಲೆ ಚಿರತೆ ದಾಳಿ ನಡೆಯುತ್ತಿತ್ತು.ಈ ಸಂಬಂಧ ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಇಂದು ಚಿರತೆ ದಾಳಿಗೆ ಕುರಿಗಳು ಬಲಿಯಾಗಿವೆ ಎಂದು ಅರಣ್ಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಇನ್ನೂ ಸ್ಥಳಕ್ಕೆ ಮಾಲೂರು ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರದಿ-ಮಾರುತೇಶ್ ಎಕ್ಸ್ ಪ್ರೆಸ್ ಟಿವಿ ಮಾಲೂರು

Click to comment

Trending

Exit mobile version