ರಾಯಚೂರು

ದೆಹಲಿಯಲ್ಲಿನ ರೈತರ ಹೋರಾಟಕ್ಕೆ ಬೆಂಬಲಿಸಿ ಸಿಐಟಿಯು ಪ್ರತಿಭಟನೆ..!

Published

on

ರಾಯಾಚೂರು: ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಪ್ರವಾಸಿ ಮಂದಿರದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತಾ ಸಿಂಧನೂರು ಸಿಐಟಿಯು ತಾಲೂಕು ಸಮಿತಿ ವತಿಯಿಂದ ರೈತರ ಮರಣ ಶಾಸನವಾದ ಮೂರು ಕಾಯ್ದೆಗಳನ್ನು ಕೈಬಿಡುವಂತೆ ಒತ್ತಾಯಿಸಿ ಸಿಂಧನೂರು ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸಿಐಟಿಯು ತಾಲೂಕು ಕಾರ್ಯದರ್ಶಿ ಶೇಕ್ಷಾ ಖಾದ್ರಿ ಅವರು ಕೇಂದ್ರ ಸರ್ಕಾರ ರೈತರ ಬಗ್ಗೆ ನಿಷ್ಕಾಳಜಿಯನ್ನು ತೋರುತ್ತಿದೆ. ರೈತು 28 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಈಗಾಗಲೇ 60 ಜನ ರೈತರು ಮೃತಪಟ್ಟಿದ್ದಾರೆ. ಆದರೂ ಯಾವುದೇ ರೀತಿಯಾಗಿ ಮೋದಿ ಸರ್ಕಾರ ರೈತರ ಬಗ್ಗೆ ಕಿಂಚಿತ್ತು ಕಾಳಜಿ ತೋರುತ್ತಿಲ್ಲ, ನಿಜಕ್ಕೂ ಇದು ದುರಾಡಳಿತವೇ ಸರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವರದಿ- ಸೈಯದ್ ಬಂಧೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Click to comment

Trending

Exit mobile version