ಮಂಡ್ಯ

ಕನ್ನಡ ಸಾಹಿತ್ಯ ಪರಿಷತ್ತಿಗೆ 2021 ರಲ್ಲಿ ನಡೆಯಲಿರುವ ಕಸಪಾ ಚುನಾವಣೆ ಪ್ರಚಾರ..!

Published

on

ಮಳವಳ್ಳಿ: ಕನ್ನಡ ಸಾಹಿತ್ಯ ಪರಿಷತ್ತಿಗೆ 2021 ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ವರ್ಧಿಸಲಿರುವ ಚನ್ನೇಗೌಡರು ಮಳವಳ್ಳಿ ಪಟ್ಟಣದ ವಿಶ್ವ ಮಾನವ ವಿಚಾರ ವೇದಿಕೆ ಕಚೇರಿಗೆ ಇಂದು ಭೇಟಿ ನೀಡಿದರು. ಇದೇ ವೇಳೆ ಚನ್ನೇಗೌಡರವರು ಮಾತನಾಡಿ, ಕಸಪಾದಲ್ಲಿ ಮತ್ತಷ್ಟು ಸುಧಾರಣೆಯಾಗಬೇಕಾಗಿದೆ. ಕನ್ನಡ ಪರ ಸಂಘಟನೆಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಗೆ ಸೇರಿಸಿಕೊಂಡು ಕನ್ನಡ ಪರ ಹೋರಾಟ ಮಾಡಬೇಕಾಗಿದೆ. ಇದಲ್ಲದೆ ಕನ್ನಡವನ್ನು ಉಳಿಸಬೇಕಾಗಿದೆ ಎಂದರು. ಇನ್ನೂ ಯುವ ಬರಹಗಾರರಗಳನ್ನು ಹೊರತರುವ ಕೆಲಸವನ್ನು ಕಸಪಾ ಮಾಡಬೇಕಾಗಿದೆ ಈ ನಿಟ್ಟಿನಲ್ಲಿ ನಿಲುವುಗಳನ್ನು ಮುಂದೆ ಇಟ್ಟುಕೊಂಡು ನಾನು ಚುನಾವಣೆಯಲ್ಲಿ ಸ್ವರ್ಧಿಸುತ್ತಿದ್ದೇನೆ ಎಂದರು. ಈ ಭಾರಿ ನನ್ನನ್ನು ಆಯ್ಕೆ ಮಾಡಲು ನಿಮ್ಮ ಸಹಕಾರ ಬೇಕು. ಇದಲ್ಲದೆ ನಾನು ಸಹ ಮಂಡ್ಯ ಜಿಲ್ಲೆಯವನು ಕಸಪಾ ಪ್ರಗತಿಗೆ ನಾವೆಲ್ಲರೂ ಒಟ್ಟಾಗಿ ಅಭಿವೃದ್ಧಿ ಪಡಿಸೋಣ ಎಂದರು.ಇನ್ನೂ ಈ ಕಾರ್ಯಕ್ರಮದಲ್ಲಿ ವಿಶ್ವಮಾನವ ವಿಚಾರ ವೇದಿಕೆ ಅಧ್ಯಕ್ಷ ಮ.ಸಿ ನಾರಾಯಣ, ಪ್ರಧಾನ ಕಾರ್ಯದರ್ಶಿ ನಾಗೇಶ್, ಖಜಾಂಚಿ ಡಾ.ಮಹದೇವ, ಕಸಪಾ ತಾಲ್ಲೂಕು ಅಧ್ಯಕ್ಷ ದೇವರಾಜು, ಪ್ರಾಂತ ರೈತ ಸಂಘದ ಅಧ್ಯಕ್ಷ ಭರತ್ ರಾಜ್ ಇದ್ದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version