ತುಮಕೂರು

ತುಮಕೂರಿನ ಮಧುಗಿರಿಯಲ್ಲಿ ಚಿರತೆ ದಾಳಿ-ಭಯದಲ್ಲೇ ದಿನದೂಡುತ್ತಿರುವ ಸಿಬ್ಬಂದಿ..!

Published

on

ತುಮಕೂರಿನ ಮಧುಗಿರಿಯ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಸಮೀಪ ಹಾಡುಹಗಲೇ ಚಿರತೆ ದಾಳಿ ನಡೆಸಿದ್ದು, ಕಳೆದ 3 ದಿನಗಳಿಂದ ಇಲ್ಲಿ ಚಿರತೆ ಪ್ರತ್ಯಕ್ಷವಾಗುತ್ತಿದೆ. ಇನ್ನೂ ಚಿರತೆ ಹಂದಿ, ನಾಯಿ, ಮೇಕೆಗಳನ್ನು ಹೊತ್ತೊಯ್ದಿದೆ. ಇನ್ನು ಚಿರತೆ ಭಯದಿಂದ ಬೈಯೋಮೇಟ್ರಿಕ್ ಸಹಿ ಮಾಡಲು ಇಲ್ಲಿನ ಸಿಬ್ಬಂದಿ ಭಯ ಪಡುತ್ತಿದ್ದು, ಇಲ್ಲಿನ ಸಿಬ್ಬಂದಿಗಳು ಪ್ರತಿ ದಿನ ಭಯದ ವಾತಾವರಣದಲ್ಲಿಯೇ ವಿದ್ಯಾರ್ಥಿ ನಿಲಯಕ್ಕೆ ಹಾಜರಾಗುತ್ತಿದ್ದಾರೆ. ಇನ್ನೂ ಈ ಸಂಬಂಧ ಅರಣ್ಯ ಇಲಾಖೆಗೆ ಮನವಿ ಪತ್ರ ಸಲ್ಲಿಸಿದರು ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ- ದೇವರಾಜ್ ಕೆ.ಎನ್. ಎಕ್ಸ್ ಪ್ರೆಸ್ ಟಿವಿ ಕೊರಟಗೆರೆ

Click to comment

Trending

Exit mobile version