ರಾಯಚೂರು

ಕೃಷಿ ಎಂಜಿನಿಯರಿಂಗ್ ಪದವಿಯಲ್ಲಿ ಗರಿಷ್ಠ ಅಂಕ ಪಡೆದು ಚಿನ್ನದ ಪದಕ ಪಡೆದ ರೇಖಾ ಗುಂಡಪ್ಪ..!

Published

on

ರಾಯಚೂರು: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 2018-19 ನೇ ಸಾಲಿನ ಘಟಿಕೋತ್ಸವ ಸಮಾರಂಭವನ್ನು ಭಾರತೀಯ ಕೃಷಿ ಸಂಶೋಧನಾ ಸಮಿತಿಯ ಶಿಕ್ಷಣ ವಿಭಾಗದ ಉಪನಿರ್ದೇಶಕ ಡಾ.ಆರ್.ಸಿ.ಅಗರವಾಲ್ ಉದ್ಘಾಟಿಸಿದರು. ಕೋವಿಡ್ ಸೋಂಕು ತಡೆ ಕಾರಣ ಚಿನ್ನದ ಪದಕ ಹಾಗೂ ಗರಿಷ್ಠ ಅಂಕಗಳನ್ನು ಪಡೆದು ಸಾಧನೆ ಮಾಡಿರುವ ವಿವಿಧ ವಿಭಾಗಗಳ 49 ವಿದ್ಯಾರ್ಥಿಗಳು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಕುಲಪತಿ ಡಾಕೆಎನ್ ಕಟ್ಟಿಮನಿ ಸಮ್ಮುಖದಲ್ಲಿ ಡಾ.ಆರ್. ಸಿ. ಅಗರವಾಲ್ ಅವರು ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ವಿತರಿಸಿದರು.ಬಿಎಸ್ಸಿ ಕೃಷಿ ಪದವಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಸಹನಾ ರಾಮನಗೌಡ ಪೊಲೀಸ್ ಪಾಟೀಲ ಆರು ಚಿನ್ನದ ಪದಕಗಳು ಮತ್ತು ನಗದು ಬಹುಮಾನ ಪಡೆದರು. ಕೃಷಿ ಎಂಜಿನಿಯರಿಂಗ್ ಪದವಿಯಲ್ಲಿ ಗರಿಷ್ಠ ಅಂಕಗಳನ್ನು ಪಡೆದಿರುವ ರೇಖಾ ಗುಂಡಪ್ಪ ಅವರೂ ಆರು ಚಿನ್ನದ ಪದಕಗಳು ಮತ್ತು ನಗದು ಪುರಸ್ಕಾರ ಪಡೆದರು.

ವರದಿ-ಬಾಬಾ ಎಕ್ಸ್ ಪ್ರೆಸ್ ಟಿವಿ ರಾಯಚೂರು

Click to comment

Trending

Exit mobile version