ಚಿಕ್ಕಬಳ್ಳಾಪುರ

ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆ- ಸೆಲ್ಪಿ ವಿಡೀಯೊ ವೈರಲ್ ..!

Published

on

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಸುಲ್ತಾನ ಪೇಟೆಯ ನಿವಾಸಿ ರಾಘವೇಂದ್ರ ಕೆ.ವಿ.ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಮಾಡಿಕೊಳ್ಳುವ ಮುನ್ನ ಮಾಡಿರುವ ಸೆಲ್ಪಿ ವೀಡಿಯೋ ಇದೀಗ ಎಲ್ಲೇಡೆ ವೈರಲ್ ಆಗಿದೆ. ಆ ವೀಡಿಯೋದಲ್ಲಿ ತನ್ನ ಹೆಸರು ಕೆ.ವಿ ರಾಘವೇಂದ್ರ ನಾನು ನಂದಿ ಗ್ರಾಮದ ಮಾರಮ್ಮ ಮತ್ತು ಸುಲ್ತಾನಪೇಟೆಯ ಸಫಲಮ್ಮ ದೇವಿಯ ದೇವಾಲಯದ ಪೂಜಾರಿಯಾಗಿದ್ದು, 2015-16 ರಲ್ಲಿ ಅಕ್ಷತಾ ಕೋ ಆಪರೇಟಿವ್ ಲಿಮಿಟೆಡ್ ಎಂಬ ಖಾಸಗಿ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದೆ. ಸಾರ್ವಜನಿಕರಿಂದ ಫೈನಾನ್ಸ್ ಕಂಪನಿಗೆ ಹಣ ಕಟ್ಟಿಸಿದ್ದೆ, ಆದ್ರೇ ಫೈನಾನ್ಸ್ ಕಂಪನಿ ಮುಚ್ಚಿದಾಗ ಹಣ ಕಟ್ಟಿದವರಿಗೆ ಹಣ ವಾಪಸ್ಸು ನೀಡಲು ಹಲವರ ಬಳಿ 8ಲಕ್ಷ ಸಾಲ ಮಾಡಿದ್ದೆ. ಸಾಲ ನೀಡಿದ್ದ ಸಾಲಗಾರರು ಬಡ್ಡಿಗೆ ಬಡ್ಡಿ ಸೇರಿಸಿ ಮೀಟರ್ ಬಡ್ಡಿ ಲೆಕ್ಕದಲ್ಲಿ 1 ರಿಂದ 2 ಕೋಟಿ ನೀಡಬೇಕೆಂದು ಕಿರುಕುಳ ನೀಡಿದ್ದರಿಂದ ತಾನು ಆತ್ಮಹತ್ಯೆ ಮಾಡಿ ಕೊಳ್ಳುವುದಾಗಿ ತಿಳಿಸಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವರದಿ- ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ

Click to comment

Trending

Exit mobile version