ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದ ಕೆರೆ ಅಂಗಳದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಸಂಘದ ಅಡಿಯಲ್ಲಿ ತಾಲ್ಲೂಕಿನ ಬೋದುಗೂರು ಕೆರೆಯಲ್ಲಿ ಹೂಳೆತ್ತುವ ಕಾರ್ಯಕ್ರಮದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ತದನಂತರ ಅದ್ಯಕ್ಷತೆ ವಹಿಸಿದ ಕೆರೆ ಬಳಕೆದಾರರ ಸಂಘದ ಅದ್ಯಕ್ಷ ವೆಂಕಟಸ್ವಾಮಿ ರೆಡ್ಡಿ ಮಾತನಾಡಿ ಈಗಾಗಲೆ ಗ್ರಾಮ ಪ್ರದೇಶಗಳಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ಪೂಜ್ಯರ ಸಮಕ್ಷಮದಲ್ಲಿ ಕೆರೆ ಹೊಳೆತ್ತುವ ಕಾರ್ಯ ನಡೆಯುತ್ತಿದಿದ್ದು, ಇಂದು ನಮ್ಮ ಬೋದಗೂರು ಗ್ರಾಮದ ಕೆರೆ ಹೂಳೆತ್ತಲು 18.50 ಲಕ್ಷ ಬಿಡುಗಡೆ ಮಾಡಿ ಪುಣ್ಯವಂತರಾಗಿದ್ದಾರೆ ಎಂದರು. ಮಳೆ ನೀರು ಸರಾಗವಾಗಿ ಹರಿಯದೆ ಕೆರೆಗೆ ನೀರು ಬರುತ್ತಿಲ್ಲ ಮೊದಲು ನೀರು ಬರಲು ಕಾಲುವೆಗಳು ತೆರವುಗೊಳಿಸಿ ಸ್ವಚ್ಚಗೊಳಿಸಿ ಎಂದು ಗ್ರಾಮಸ್ಥರು ಮನವಿ ಮಾಡಿದರು. ಇನ್ನೂ ಈ ಸಂದರ್ಭದಲ್ಲಿ ವೃದ್ಧರಿಗೆ ಮಾಶಾಸನ ಬಿಡುಗಡೆಗೊಳಿಸಿದರು.
ವರದಿ- ಶ್ರೀನಿವಾಸ್ ಎಕ್ಸ್ ಪ್ರೆಸ್ ಟಿವಿ ಚಿಕ್ಕಬಳ್ಳಾಪುರ