ಬೆಂಗಳೂರು

ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ

Published

on

ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ

ಆಮ್ಲಜನಕ ಕೊರತೆಯಿಂದ ಇನ್ನು ಮುಂದೆ ಯಾವುದೇ ಸಾವು‌ ರಾಜ್ಯದಲ್ಲಿ ಸಂಭವಿಸದಂತೆ ನೋಡಿಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತು ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಈಗಾಗಲೇ 28 ಜನ ಚಾಮರಾಜನಗರದಲ್ಲಿ ಸತ್ತಿದ್ದಾರೆ. 3 ಜನ ಸತ್ತಿದ್ದಾರೆ ಎಂಬ ಸುಧಾಕರ್ ಹೇಳಿಕೆ ಶುದ್ಧ ಸುಳ್ಳು. ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಬಗ್ಗೆ ಹೇಳಿದ್ದಾರೆ. ಇಟ್ಸ್ ಗುಡ್.‌ ಒಳ್ಳೇದೇ ಮಾಡಿದ್ದಾರೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.

Click to comment

Trending

Exit mobile version