ರಾಜಧಾನಿ ದೆಹಲಿಯಲ್ಲಿ ಆಮ್ಲಜನಕದ ಬಿಕ್ಕಟ್ಟು ಮುಂದುವರೆದಿದೆ. ಕಳೆದ ಹಲವು ದಿನಗಳಿಂದ ದೆಹಲಿ ಹೈಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ಪ್ರತಿ ವಿಚಾರಣೆಯಲ್ಲಿ ಆಮ್ಲಜನಕವನ್ನ ನಿಯಮಿತವಾಗಿ ಪೂರೈಸಲು ನಿರ್ದೇಶನ ನೀಡುತ್ತಿತ್ತು. ಆದ್ರೆ, ಅದು ಕಾರ್ಯರೂಪಕ್ಕೆ ಬಂದಿಲ್ಲ. ಹಾಗಾಗಿ ಇಂದು ಸುಪ್ರೀಂ ಕೋರ್ಟ್ ಸೋಮವಾರದೊಳಗೆ ಆಮ್ಲಜನಕ ಪೂರೈಸುವಂತೆ ತನ್ನ ಆದೇಶದಲ್ಲಿ ಸೂಚಿಸಿದೆ. ದೆಹಲಿಗೆ 700 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿಲ್ಲ ಎಂದು ಕೇಂದ್ರವು ದೆಹಲಿ ಹೈಕೋರ್ಟ್ʼನಲ್ಲಿ ಏಕೆ ಹೇಳಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಆದೇಶವನ್ನ ಪಾಲಿಸುವುದು ಮತ್ತು ವಿಫಲ ಅಧಿಕಾರಿಗಳನ್ನ ಜೈಲಿಗೆ ಹಾಕುವುದು ಕೇಂದ್ರದ ಜವಾಬ್ದಾರಿ ಎಂದು ಹೇಳಿದೆ. ಇದೇ ವೇಳೆ, 10ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಸಲಿದ್ದು, ನಂತರ ರಾಜ್ಯ ಸರ್ಕಾರದ ಸನ್ನದ್ಧತೆಯ ಬಗ್ಗೆ ಪರಿಶೀಲಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.