ರಾಯಚೂರು(ಲಿಂಗಸೂಗೂರು): ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬಯ್ಯಾಪೂರ ಗ್ರಾಮದ ಆಶಾ ಕಾರ್ಯಕರ್ತೆ ಅಂಬುಜಾ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಬೇಕೆAದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷೆ ರೂಪಾ ಶ್ರೀನಿವಾಸ ನಾಯಕ ಒತ್ತಾಯಿಸಿದ್ದಾರೆ.
ಅಂದ ಹಾಗೇ ಬಯ್ಯಾಪೂರ ಗ್ರಾಮಕ್ಕೆ ಮತ್ತು ಮುದಗಲ್ ಠಾಣೆಗೆ ಭೇಟಿ ವೇಳೆ ಮಾತನಾಡಿದ ರೂಪಾ ಶ್ರೀನಿವಾಸ ನಾಯಕ, ಬಯ್ಯಾಪೂರ ಗ್ರಾಮದಲ್ಲಿ ಮಹಿಳೆ ಅಂಬುಜಾಗೆ ಯಾರು ಇಲ್ಲ.ಸದ್ಯ ಈ ಮಹಿಳೆ ಮೇಲೆ ಅದೇ ಗ್ರಾಮದ ಹನುಮನಗೌಡ ಹಾಗೂ ಆತನ ಕುಟುoಬಸ್ಥರು ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ.ಈ ಸಂಬAಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೀಗಾಗಿ ಮಹಿಳೆಯ ಸುರಕ್ಷತೆಗಾಗಿ ಕೂಡಲೇ ಪೊಲೀಸ್ ಇಲಾಖೆ ಅಧಿಕಾರಿಗಳು ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಬೇಕು ಅಂತ ಆಗ್ರಹಿಸಿದ್ರು..
ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ (ಲಿಂಗಸೂಗೂರು) ರಾಯಚೂರು