`ಎಲ್ಲರೂ ಗಿಡ ನೆಟ್ಟು ಪೋಷಣೆ ಮಾಡಿ’

ಹಾಸನ (ಅರಸೀಕೆರೆ):ಅರಸೀಕೆರೆ ತಾಲೂಕಿನಾದ್ಯಂತ ಒಂದು ವರ್ಷಗಳಿಂದ ಪರಿಸರ ಪ್ರೇಮಿ ವಿಜಯ್ ಕುಮಾರ್ ಗಿಡ ನೆಟ್ಟು ಪೋಷಣೆ ಮಾಡುತ್ತಾ ಬಂದಿದ್ದಾರೆ. ಸದ್ಯ ಇಂದು ಪರಿಸರ ದಿನಾಚರಣೆ ಅಂಗವಾಗಿ ಮತ್ತೊಂದು ಸಸಿ ನೆಟ್ಟು ಸುಮಾರು ಇಲ್ಲಿಯವರೆಗೂ ೨ ಲಕ್ಷ ಸಸಿಗಳನ್ನು ನೆಟ್ಟು ಪೋಷಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇನ್ನು ಈ ಗಿಡ ನೆಡುವ ಕಾರ್ಯಕ್ರಮದಲ್ಲಿ ಹಾಜರಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ವಿ.ಟಿ.ಬಸವರಾಜ್ ಮಾತನಾಡಿ, ಗಿಡಮರಗಳಿಂದ ನಮ್ಮ ಪರಿಸರ ತಂಪಾಗಿರುತ್ತದೆ.ಮರಗಳು ಬಿಡುವ ಆಮ್ಲಜನಕದಿಂದ ಜನಸಾಮಾನ್ಯರಿಗೆ ಒಳ್ಳೆಯ ಗಾಳಿ ಸಿಗುತ್ತದೆ.ಈಗಾಗಲೇ ಆಕ್ಸಿಜನ್ ಗೋಸ್ಕರ ಜನರು ಪರದಾಡುವ ಪರಿಸ್ಥಿತಿ ಬಂದಿದೆ.ಗಿಡಮರಗಳು ಬೆಳೆದರೆ ನಮಗೆ ನಮ್ಮ  ಪರಿಸರಕ್ಕೆ ಒಳ್ಳೆಯದು ಎಂದರಲ್ಲದೆ, ಇಂದು ಪರಿಸರ ದಿನಾಚರಣೆ ಅಂಗವಾಗಿ ಮನೆಗೊಂದು ಮರ, ಊರಿಗೊಂದು ವನ ಎಂಬAತೆ ಎಲ್ಲರೂ ಗಿಡ ನೆಟ್ಟು ಪೋಷಣೆ ಮಾಡಿ ಎಂದು ಕರೆ ನೀಡಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಅವಿನಾಶ್ ನಾಯ್ಡು,…

Read More

ಕೊರೊನಾ ರೋಗಿಗಳೊಂದಿಗೆ ಡಾಕ್ಟರ್ ಗಳ ಹಾಡು..ಡ್ಯಾನ್ಸ್..

ಕಲಬುರಗಿ : ಕೊರೊನಾ ಕಡಿಮೆಯಾದ ಹಿನ್ನಲೆಯಲ್ಲಿ ಕಲಬುರಗಿ ನಗರದ ಬಸವೇಶ್ವರ ಆಸ್ಪತ್ರೆ ವೈದ್ಯರು ಕೊರೊನಾ ರೋಗಿಗಳೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ.. ಅಂದ ಹಾಗೇ ವರನಟ ಡಾ.ರಾಜಕುಮಾರ್ ಅವರ ಸೂಪರ್ ಹಿಟ್ ಚಿತ್ರಗೀತೆ `ನಗುತ್ತಾ..ನಗುತ್ತಾ..ಬಾಳು ನೀನು ಎಂಬ ಹಾಡಿಗೆ’ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗಳು ಸಖತ್ ಸ್ಟೇಫ್ ಹಾಕಿದ್ದಾರೆ.. ಸದ್ಯ ಆಸ್ಪತ್ರೆ ವೈದ್ಯರ ಹಾಡುಗಾರಿಗೆ ಹಾಗೂ ಡ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರು ಸಹ ಫುಲ್ ಖುಷ್ ಆಗಿದ್ದಾರೆ. ಇನ್ನು ರಾಜ್ಯದಲ್ಲಿ ಪಾಸಿಟಿವ್ ಸಂಖ್ಯೆಯಲ್ಲಿ ೩೦ನೇ ಸ್ಥಾನಕ್ಕೆ ಕಲಬುರಗಿ ಜಿಲ್ಲೆ ಇಳಿದಿದೆ.ಜೊತೆಗೆ ಬೀದರ್ ಬಿಟ್ಟರೆ ಕಲಬುರಗಿಯಲ್ಲೇ ಅತೀ ಕಡಿಮೆ ಅಂದರೆ ಕೇವಲ ೩.೮%ಗೆ ಪಾಸಿಟಿವ್ ಸಂಖ್ಯೆ ಇಳಿದಿದೆ.. ಉಮೇಶ್ ಅಚಲೇರಿ ಎಕ್ಸ್ ಪ್ರೆಸ್ ಟಿವಿ ಕಲಬುರಗಿ

Read More

ಹತ್ತಲ್ಲ, ಇಪ್ಪತ್ತಲ್ಲ ಐವತ್ತು ಲಕ್ಷ ರೂ. ಬೆಲೆಬಾಳುವ ಔಷಧಿ ದಾನ ಮಾಡಿದ ಅಪರಿಚಿತ..!

ಹಾವೇರಿ(ರಾಣೆಬೆನ್ನೂರು):ಕೊರೊನಾ ಸಂದರ್ಭದಲ್ಲಿ ರೋಗಿಗಳಿಂದ ಹಿಡಿದು ಬಡವ, ಶಮ್ರಿಕ ಸೇರಿ ಇತರೆ ವರ್ಗದವರಿಗೆ ದಾನಿಗಳು ಮುಂದೆ ಬಂದು ದಾನ ಮಾಡುವುದನ್ನು ನೋಡಿದ್ದೇವೆ.ಆದರೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮಾತ್ರ ಅನಾಮಧೇಯ ವ್ಯಕ್ತಿಯೊಬ್ಬರು ಸುಮಾರು ೫೦ ಲಕ್ಷ ರೂಪಾಯಿ ಬೆಲಬಾಳುವ ಔಷಧಿಗಳ ದಾನ ಮಾಡಿ ತೆರೆಮರೆಗೆ ಉಳಿದಿದ್ದಾರೆ. ಅಂದ ಹಾಗೇ ಕೋವಿಡ್‌ಗೆ ಸಂಬAಧಿಸಿದAತೆ ಸುಮಾರು ೫೦ ಲಕ್ಷ ರೂಪಾಯಿ ಮೌಲ್ಯದ ಔಷಧಿಗಳು, ಮಾಸ್ಕ್, ಫೇಸ್ ಶೀಲ್ಡ್, ಮತ್ತು ಇಂಜೆಕ್ಷನ್‌ಗಳನ್ನು ಹೆಸರು ಹೇಳಲು ಇಚ್ಛಿಸದ ದಾನಿಯೊಬ್ಬರು ಹಾವೇರಿ ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದ್ದಾರೆ… ಸದ್ಯ ಹಾವೇರಿ ಜಿಲ್ಲಾಡಳಿತವು ಶೀಘ್ರದಲ್ಲೇ ಇದನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳಿಗೆ ನೀಡಲಿದ್ದು,ಹಾವೇರಿ ಜಿಲ್ಲಾಧಿಕಾರಿ ಆ ಅಪರಿಚಿತ ದಾನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.   ಬಸವನಗೌಡ ಎಕ್ಸ್ ಪ್ರೆಸ್ ಟಿವಿ (ರಾಣೆಬೆನ್ನೂರು) ಹಾವೇರಿ

Read More

ಕೊರೊನಾ ಸೋಂಕಿತ ಕುಟುಂಬಗಳಿಗೆ ಔಷಧಿ ಕಿಟ್ ಹಸ್ತಾಂತರ..

ಮೈಸೂರು(ಪಿರಿಯಾಪಟ್ಟಣ):ಗ್ರಾಮಾAತರ ಪ್ರದೇಶದ ಕೊರೊನಾ ಸೋಂಕಿತ ವ್ಯಕ್ತಿ ಹಾಗೂ ಅವರ ಕುಟುಂಬಗಳಿಗೆ  ಔಷಧಿ ಕಿಟ್ ವಿತರಿಸಿ ಆತ್ಮಸ್ಥೈರ್ಯ ತುಂಬಲು ಗ್ರಾಮ ಪಂಚಾಯಿತಿವಾರು ತೆರಳುತ್ತಿದ್ದೇನೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಪುರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ ವಿತರಿಸಲು ಪುರಸಭಾ ಸಾಮಾನ್ಯ ನಿಧಿಯಿಂದ ಸುಮಾರು ೩ ಲಕ್ಷ ರೂಪಾಯಿ ವೆಚ್ಚದ ಔಷಧಿ ಕಿಟ್‌ಗಳನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಪಕ್ಷಭೇದ ಮರೆತು ರಾಜಕೀಯ ಮಾಡದೆ ಈ ಕೆಲಸ ನಿರ್ವಹಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇನ್ನು ಪುರಸಭಾ ಅಧ್ಯಕ್ಷ ಮಂಜುನಾಥ್ ಸಿಂಗ್ ಮಾತನಾಡಿ,ಕೊರೊನಾ ರೋಗವನ್ನು ನಿರ್ಮೂಲ ಮಾಡಲು ಸರ್ಕಾರದ ಜೊತೆ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದರು. ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್ ಮಾತನಾಡಿ, ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇದ್ದವರು ಪಂಚ ಸೂತ್ರಗಳನ್ನು ಪಾಲಿಸಿದರೆ ಯಾವುದೇ ರೋಗ ಬಾಧಿಸುವುದಿಲ್ಲ ಆ ನಿಟ್ಟಿನಲ್ಲಿ ಪುರಸಭೆಯ…

Read More

ಗದಗದಲ್ಲಿ ಡಿಎಪಿ ರಸಗೊಬ್ಬರಕ್ಕಾಗಿ ರೈತರ ಪರದಾಟ…

ಗದಗ: ಗದಗ ಜಿಲ್ಲೆಯಲ್ಲಿ ಡಿಎಪಿ ರಸಗೊಬ್ಬರಕ್ಕಾಗಿ ರೈತರು ಪರದಾಟ ಆರಂಭಿಸಿದ್ದಾರೆ. ಸದ್ಯ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಿತ್ತನೆ ಮಾಡಲು ಡಿಎಪಿ ರಸಗೊಬ್ಬರ ಅವಶ್ಯಕವಾಗಿರುವ ಹಿನ್ನೆಲೆಯಲ್ಲಿ ಈ ಗೊಬ್ಬರಕ್ಕಾಗಿ ರೈತರು ಪರದಾಟ ನಡೆಸುತ್ತಿದ್ದಾರೆ. ಇನ್ನು ಡಿಎಪಿ ರಸಗೊಬ್ಬರ ಇದ್ದರು ಅದನ್ನು ಕೊಡುವುದಕ್ಕೆ ಅಂಗಡಿ ಮಾಲೀಕರು ನಿರಾಕರಿಸುತ್ತಿದ್ದಾರೆ. ಅಲ್ಲದೆ, ೧೦ ಗಂಟೆ ನಂತರ ಬನ್ನಿ ಗೊಬ್ಬರ ನೀಡುತ್ತೇವೆ ಎಂಬ ಸಬೂಬು ಹೇಳುತ್ತಿದ್ದಾರೆ ಅಂತ ಗದಗ ತಾಲೂಕಿನ ಹರ್ತಿ ಗ್ರಾಮದ ರೈತರು ಆಕ್ರೋಶ ವ್ತಕ್ತಪಡಿಸಿದ್ದಾರೆ. ಇದರ ಜೊತೆಗೆ ತಾಂತ್ರಿಕ ಕಾರಣದಿಂದ ಬಯೋಮೆಟ್ರಿಕ್ ಬಂದ್ ಆಗಿರುವ ಹಿನ್ನೆಲೆಯಲ್ಲಿ ಗೊಬ್ಬರ ಖರೀದಿಗೆ ಬಂದ ರೈತರು ಖಾಲಿ ಕೈಯಲ್ಲಿ ವಾಪಸ್ ತೆರಳುವಂತಾಗಿದೆ. ರಾಕೇಶ್ ಎಕ್ಸ್ ಪ್ರೆಸ್ ಟಿವಿ ಗದಗ

Read More

ಮಹಿಳೆ ಮೇಲೆ ಹಲ್ಲೆ ; ಆರೋಪಿಗಳ ಬಂಧನಕ್ಕೆ ರೈತ ಸಂಘ ಆಗ್ರಹ

ರಾಯಚೂರು(ಲಿಂಗಸೂಗೂರು): ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಬಯ್ಯಾಪೂರ ಗ್ರಾಮದ ಆಶಾ ಕಾರ್ಯಕರ್ತೆ ಅಂಬುಜಾ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಬೇಕೆAದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷೆ ರೂಪಾ ಶ್ರೀನಿವಾಸ ನಾಯಕ ಒತ್ತಾಯಿಸಿದ್ದಾರೆ. ಅಂದ ಹಾಗೇ ಬಯ್ಯಾಪೂರ ಗ್ರಾಮಕ್ಕೆ ಮತ್ತು ಮುದಗಲ್ ಠಾಣೆಗೆ ಭೇಟಿ ವೇಳೆ ಮಾತನಾಡಿದ ರೂಪಾ ಶ್ರೀನಿವಾಸ ನಾಯಕ, ಬಯ್ಯಾಪೂರ ಗ್ರಾಮದಲ್ಲಿ ಮಹಿಳೆ ಅಂಬುಜಾಗೆ ಯಾರು ಇಲ್ಲ.ಸದ್ಯ ಈ ಮಹಿಳೆ ಮೇಲೆ ಅದೇ ಗ್ರಾಮದ ಹನುಮನಗೌಡ ಹಾಗೂ ಆತನ ಕುಟುoಬಸ್ಥರು ಮಹಿಳೆ ಮೇಲೆ  ಹಲ್ಲೆ ಮಾಡಿದ್ದಾರೆ.ಈ ಸಂಬAಧ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹೀಗಾಗಿ ಮಹಿಳೆಯ ಸುರಕ್ಷತೆಗಾಗಿ ಕೂಡಲೇ ಪೊಲೀಸ್ ಇಲಾಖೆ ಅಧಿಕಾರಿಗಳು ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಬೇಕು ಅಂತ ಆಗ್ರಹಿಸಿದ್ರು..   ವೀರೇಶ್ ಅರಮನಿ ಎಕ್ಸ್ ಪ್ರೆಸ್ ಟಿವಿ (ಲಿಂಗಸೂಗೂರು) ರಾಯಚೂರು

Read More

ಸಿಡಿಲು ಬಡಿದು ನಾಲ್ವರ ಸಾವು

ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.ಮೊದಲ ಘಟನೆಯಲ್ಲಿ ಮೃತರನ್ನು ಚೆನ್ನಾಪುರಿ ಮತ್ತು ವೀರಣ್ಣ ಎಂದು ಗುರುತಿಸಲಾಗಿದ್ದು, ಹೊಲಗಳಲ್ಲಿ ದನ ಮೇಯಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಮತ್ತೊಂದು ಘಟನೆಯಲ್ಲಿ, ಹರವಡಹಳ್ಳಿಯ ಜರ್ಮಹಳ್ಳಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜಶೇಖರ್ ತಮ್ಮ ಕೃಷಿ ಜಮೀನಿನಿಂದ ಹಿಂದಿರುಗುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದು, ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ. ಮೂರನೇ ಘಟನೆಯಲ್ಲಿ, ಅಯ್ಯನಹಳ್ಳಿ ಗ್ರಾಮದ ಪತ್ರೆಪ್ಪ ತನ್ನ ಕಿರಾಣಿ ಅಂಗಡಿ ಬಾಗಿಲು ಮುಚ್ಚುತ್ತಿದ್ದಾಗ ಸಿಡಲು ಬಡಿದು ಸಾವನ್ನಪ್ಪಿದ್ದಾರೆ. ತಹಶೀಲ್ದಾರ್ ಮಹಾಬಲೇಶ್ವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More

“ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ಇಲ್ಲೇ ಬಳಕೆಯಾಗ್ಬೇಕು”

ಆಕ್ಸಿಜನ್ ಸರಬರಾಜು ಬಗ್ಗೆ ಸಭೆ ನಡೆಸಿದ್ದೇವೆ. ಟಾಸ್ಕ್ ಫೋರ್ಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು. ಹಲವು ಸೂಚನೆ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ನಮ್ಮ ರಾಜ್ಯದಲ್ಲಿ ಉತ್ಪಾದನೆ ಆಗುವ ಆಕ್ಸಿಜನ್ ನಮ್ಮಲ್ಲೇ ಬಳಕೆ ಆಗುವಂತೆ ಆಗಬೇಕು. ಈ ಬಗ್ಗೆ ಕೇಂದ್ರ ಸಚಿವ ಪಿಯೂಶ್ ಘೋಯಲ್ ಜೊತೆ ಮಾತುಕತೆ ಮಾಡಿದ್ದೇನೆ ಎಂದಿದ್ದಾರೆ.

Read More

ಕೇಂದ್ರಕ್ಕೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ರಾಜಧಾನಿ ದೆಹಲಿಯಲ್ಲಿ ಆಮ್ಲಜನಕದ ಬಿಕ್ಕಟ್ಟು ಮುಂದುವರೆದಿದೆ. ಕಳೆದ ಹಲವು ದಿನಗಳಿಂದ ದೆಹಲಿ ಹೈಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಹೈಕೋರ್ಟ್ ಪ್ರತಿ ವಿಚಾರಣೆಯಲ್ಲಿ ಆಮ್ಲಜನಕವನ್ನ ನಿಯಮಿತವಾಗಿ ಪೂರೈಸಲು ನಿರ್ದೇಶನ ನೀಡುತ್ತಿತ್ತು. ಆದ್ರೆ, ಅದು ಕಾರ್ಯರೂಪಕ್ಕೆ ಬಂದಿಲ್ಲ. ಹಾಗಾಗಿ ಇಂದು ಸುಪ್ರೀಂ ಕೋರ್ಟ್ ಸೋಮವಾರದೊಳಗೆ ಆಮ್ಲಜನಕ ಪೂರೈಸುವಂತೆ ತನ್ನ ಆದೇಶದಲ್ಲಿ ಸೂಚಿಸಿದೆ. ದೆಹಲಿಗೆ 700 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿಲ್ಲ ಎಂದು ಕೇಂದ್ರವು ದೆಹಲಿ ಹೈಕೋರ್ಟ್ʼನಲ್ಲಿ ಏಕೆ ಹೇಳಿದೆ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಆದೇಶವನ್ನ ಪಾಲಿಸುವುದು ಮತ್ತು ವಿಫಲ ಅಧಿಕಾರಿಗಳನ್ನ ಜೈಲಿಗೆ ಹಾಕುವುದು ಕೇಂದ್ರದ ಜವಾಬ್ದಾರಿ ಎಂದು ಹೇಳಿದೆ. ಇದೇ ವೇಳೆ, 10ರಂದು ಮತ್ತೆ ಪ್ರಕರಣದ ವಿಚಾರಣೆ ನಡೆಸಲಿದ್ದು, ನಂತರ ರಾಜ್ಯ ಸರ್ಕಾರದ ಸನ್ನದ್ಧತೆಯ ಬಗ್ಗೆ ಪರಿಶೀಲಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

Read More

ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ

ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ ಆಮ್ಲಜನಕ ಕೊರತೆಯಿಂದ ಇನ್ನು ಮುಂದೆ ಯಾವುದೇ ಸಾವು‌ ರಾಜ್ಯದಲ್ಲಿ ಸಂಭವಿಸದಂತೆ ನೋಡಿಕೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಒತ್ತಾಯಿಸಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಇವತ್ತು ಆಕ್ಸಿಜನ್ ಕೊರತೆಯಿಂದ ಬಹಳಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಈಗಾಗಲೇ 28 ಜನ ಚಾಮರಾಜನಗರದಲ್ಲಿ ಸತ್ತಿದ್ದಾರೆ. 3 ಜನ ಸತ್ತಿದ್ದಾರೆ ಎಂಬ ಸುಧಾಕರ್ ಹೇಳಿಕೆ ಶುದ್ಧ ಸುಳ್ಳು. ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ಬಗ್ಗೆ ಹೇಳಿದ್ದಾರೆ. ಇಟ್ಸ್ ಗುಡ್.‌ ಒಳ್ಳೇದೇ ಮಾಡಿದ್ದಾರೆ. ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.

Read More